Skip to main content

ಕನ್ನಡದ ಕತ್ತು ಹಿಚುಕುತ್ತಿರುವ ಕೇರಳ ಸರಕಾರ…!?

ಶೀರ್ಷಿಕೆ ಓದಿದಾಗ ಆಶ್ವರ್ಯ-ಪ್ರಶ್ನಾರ್ಥಕ ಭಾವಗಳು ಮೂಡುವುದು ಸಹಜ. ಆದರೆ ‘ಕನ್ನಡದ ಕತ್ತು ಹಿಚುಕುತ್ತಿರುವ ಕೇರಳ ಸರಕಾರ ಎನ್ನುವುದು ಅಕ್ಷರಶಃ ಸತ್ಯ. ಗಡಿ ಅಂಚಿನ ಕಾಸರಗೋಡಿನಿಂದ ಕನ್ನಡಕ್ಕೆ ಸ್ಥಾನವೇ ಇಲ್ಲದಂತೆ ಮಾಡುವ ನಿಟ್ಟಿನಲ್ಲಿ ಆ ಸರಕಾರ ನಾನಾ ಬಗೆಯ ತಂತ್ರಗಾರಿಕೆಯನ್ನು ಮಾಡುತ್ತಲೇ ಬಂದಿದೆ. ಭಾಷಾವಾರು ಪ್ರಾಂತ್ಯ ರಚನೆಯಾಗಿ 54 ವರ್ಷ ಸಂದರೂ ಕಾಸರಗೋಡಿನಲ್ಲಿ ಕನ್ನಡ ಉಳಿದಿರುವುದನ್ನು ಕಂಡು ಈ ಬಾರಿ ಪ್ರಬಲ ಅಸ್ತ್ತ ಪ್ರಯೋಗಿಸಿದೆ. ಇದಕ್ಕೆ ತಕ್ಕ ಪ್ರತ್ಯಸ್ತ್ರ ಹೂಡದೇ ಇದ್ದರೆ ಸಂಭವಿಸುವ ಅಪಾಯಗಳು ಅನೇಕ. ಅವುಗಳೇನು…..?
ಬದಿಯಡ್ಕ ಶಾಲಾ ಮಕ್ಕಳು
 2011ರ ಜುಲೈ 8 ರಿಂದ 17ರವರೆಗೆ ಕೇರಳದಲ್ಲಿನ ಕನ್ನಡ ಪ್ರಾಂತ್ಯಗಳಾದ ಕಾಸರಗೋಡು-ಹೊಸದುರ್ಗಗಳಲ್ಲಿ ಕ್ಷೇತ್ರ ಪ್ರವಾಸದಲ್ಲಿದ್ದೆ. ಎಂದಿನಂತೆ ಕನ್ನಡ ಭಾಷಾ ಚಳವಳಿಗಾರನ್ನು ಭೇಟಿಯಾದೆ. ‘ಕನ್ನಡಕ್ಕೆ ಭಾರಿ ಅಪಾಯ ತಂದೊಡ್ಡುವ ಕ್ರಮವನ್ನು ಕೇರಳ ಸರಕಾರ ಜರುಗಿಸಿದೆ. ಇದರಿಂದ ಕಾಸರಗೋಡಿನ ಕನ್ನಡದ ಕತ್ತು ಹಿಚುಕಿದಂತಾಗುತ್ತದೆ. ಕೆಲವೇ ವರ್ಷಗಳಲ್ಲಿ ಇಲ್ಲಿನ ಕನ್ನಡ ಸಂಸ್ಕೃತಿ ಕಣ್ಮರೆಯಾಗಲಿದೆ ಎಂಬ ಆತಂಕವನ್ನು ಮುಳ್ಳೇರಿಯಾದ ಆಯುರ್ವೇದ ವೈದ್ಯ ನರೇಶ್ ಮತ್ತು ಕಾಸರಗೋಡಿನ ಸರಕಾರಿ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕ ರತ್ನಕರ ಮಲ್ಲಮೂಲೆ ಅವರು ವ್ಯಕ್ತಪಡಿಸಿದರು.
 ಕನ್ನಡ ಭಾಷಾ ಶಾಲೆಗಳಲ್ಲಿ 10ನೇ ತರಗತಿವರೆಗೆ ಎರಡನೇ ಭಾಷೆಯಾಗಿ ಮಲೆಯಾಳಂ ಕಲಿಸಬೇಕು-ಕಲಿಯಬೇಕು ಎನ್ನವುದೇ ಈ ಆದೇಶ. ಕಾಸರಗೋಡು-ಹೊಸದುರ್ಗ ಎರಡೂ ತಾಲೂಕುಗಳು ಕೇರಳದಲ್ಲಿವೆ. ಇಲ್ಲಿ ಮಲೆಯಾಳಂ ಭಾಷೆಯನ್ನು ಕಡ್ಡಾಯ ಮಾಡಿದರೇನು ತಪ್ಪು ಎಂಬ ಪ್ರಶ್ನೆ ಮೂಡಬಹುದು. ಆದರೆ ಇಲ್ಲಿಯೇ ಭಾಷಾ ಸೂಕ್ಷ್ಮತೆ ಅಡಕವಾಗಿದೆ. ಕಾಸರಗೋಡಿಗೆ ಭಾಷಾ ಅಲ್ಪ ಸಂಖ್ಯಾತ ಪ್ರದೇಶ ಸ್ಥಾನ-ಮಾನ ಕೇರಳ ಸರಕಾರದಿಂದಲೇ ದೊರಕಿದೆ. ಆದರೆ ಇದು ಕಾಗದದ ಮೇಲಷ್ಟೇ ಉಳಿದಿದೆ. ಇದರಿಂದಾಗಿಯೇ ನಾನಾ ಒಳ ಮಾರ್ಗಗಳ ಮೂಲಕ ಇಲ್ಲಿ ಮಲೆಯಾಳಂ ಹೇರಲು ಪ್ರಯತ್ನ ನಡೆಯುತ್ತಲೇ ಇದೆ.
ಬದಿಯಡ್ಕದ ಪೆರಡಾಲ ಶಾಲೆ
 1956ರ ನವೆಂಬರ್ 1ರಂದು ಭಾಷಾವಾರು ಪ್ರಾಂತ್ಯ ರಚನೆಯಾದ ಬಳಿಕ ಕನ್ನಡಿಗ ರಾಜಕಾರಣಿಗಳ ಇಚ್ಛಾಶಕ್ತಿ ಕೊರತೆಯಿಂದಾಗಿ ಅನೇಕ ಕನ್ನಡ ಪ್ರದೇಶಗಳು ನೆರೆಯ ರಾಜ್ಯಗಳಲ್ಲಿ ಸೇರಿದವು. ಕಾಸರಗೋಡು-ಹೊಸದುರ್ಗ ಕೇರಳ ನಕ್ಷೆಯಲ್ಲಿ ಸೇರ್ಪಡೆಯಾದವು. ಇದರ ವಿರುದ್ಧ ಕಾಸರಗೋಡಿನ ಅಂದಿನ ಕನ್ನಡ ಭಾಷಾ ಹೋರಾಟಗಾರರ ಸತತ ಪ್ರಯತ್ನಗಳ ಬಳಿಕ ಮಹಾಜನ್ ಆಯೋಗ ರಚನೆಯಾಗಿ ಚಂದ್ರಗಿರಿ ನದಿಯ ಉತ್ತರ ಭಾಗ ಕನ್ನಡ ನಾಡಿಗೆ ಸೇರಬೇಕು ಎಂಬ ವರದಿಯೂ ದೊರೆಯಿತು. ಈ ನದಿಯ ದಕ್ಷಿಣಕ್ಕಿರುವ ಅಚ್ಚಗನ್ನಡ ಪ್ರದೇಶ ಹೊಸದುರ್ಗ ಕೈ ತಪ್ಪುವ ಮೂಲಕ ಅನ್ಯಾಯವಾಯಿತಾದರೂ ಸೌಮ್ಯ ಸ್ವಭಾವದ ಕನ್ನಡಿಗರು ಮಹಾಜನ್ ವರದಿಯನ್ನು ಮಾನ್ಯ ಮಾಡಿದರು. ಹೀಗಿದ್ದರೂ ಇದುವರೆಗೂ ಈ ವರದಿ ಜಾರಿಯಾಗಲಿಲ್ಲವೆಂಬುದು ವಿಷಾದದ ಸಂಗತಿ.
ಭಾಷಾವಾರು ಪ್ರಾಂತ್ಯ ರಚನೆಗೂ ಮೊದಲಿನಿಂದಲೂ ಕಾಸರಗೋಡು-ಹೊಸದುರ್ಗ ಪ್ರದೇಶಗಳಲ್ಲಿ ಕನ್ನಡ ಶಾಲೆಗಳು ವ್ಯಾಪಕವಾಗಿದ್ದವು. ಇಲ್ಲಿ ಕನ್ನಡಿಗರಷ್ಟೆ ಅಲ್ಲದೇ ತುಳು, ಕೊಂಕಣಿ, ಕರಾಡ, ಮರಾಠಿ, ಉರ್ದು, ಬ್ಯಾರಿ ಮತ್ತು ಹಳೆಯ ತಲೆಮಾರಿನ ಮಲೆಯಾಳಿಗರ ಕಲಿಕೆ ಭಾಷೆ ಕನ್ನಡವೇ ಆಗಿತ್ತು. ಭಾಷಾವಾರು ಪ್ರಾಂತ್ಯ ರಚನೆ ಬಳಿಕವೂ ಇದು ಅಬಾಧಿತವಾಗಿ ಮುಂದುವರಿಯಿತು. ಇದರಿಂದಾಗಿಯೇ ಕೇರಳ ಸರಕಾರಕ್ಕೆ ಕಾಸರಗೋಡನ್ನು ಕನ್ನಡ ಭಾಷಾ ಅಲ್ಪಸಂಖ್ಯಾತ ಪ್ರದೇಶವೆಂದು ಘೋಷಿಸುವುದು ಅನಿವಾರ್ಯವಾಯಿತು. ಮೊದಲೇ ಹೇಳಿದಂತೆ ಇದು ಘೋಷಣೆಯಾಗಿಯಷ್ಟೆ ಉಳಿಯಿತು.
‘ಕಾಸರಗೋಡು ತಾಲೂಕು ಮೂಲತಃ ತುಳುನಾಡೆಂಬುದು ನಿರ್ವಿವಾದ. ಇಲ್ಲಿ ತುಳು ಸಂಸ್ಕೃತಿಯಿದೆ. ತುಳು ಮಾತೃಭಾಷೆಯನ್ನಾಡುವ ಜನ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಇಲ್ಲಿನ ತುಳುವರು ತಾಯಿ ಭಾಷೆಯಾದ ತುಳುವಿನ ಬಗ್ಗೆ ಅಪಾರ ಪ್ರೀತಿ, ಗೌರವ ಹೊಂದಿದ್ದು ಕನ್ನಡದ ಜೊತೆಗೂ ಬೇರ್ಪಡಿಸಲಾಗದ ಸಂಬಂಧ ಹೊಂದಿದ್ದಾರೆ. ಇವರು ತುಳುವನ್ನು ಹೆತ್ತಬ್ಬೆ ಎಂದು ತಿಳಿದರೆ ಕನ್ನಡವನ್ನು ಪೊರೆದಬ್ಬೆ ಎಂದು ತಿಳಿಯುತ್ತಾರೆ. ಕನ್ನಡವೂ ತುಳುವರ ಸ್ವಂತ ಭಾಷೆ’ ಇದು ತುಳು ಸಂಶೋಧಕ ಕೇಶವ ಶೆಟ್ಟಿ ಆದೂರು ಅವರ ಖಚಿತ ಅಭಿಪ್ರಾಯ.
 ಇಲ್ಲಿನ ಕೊಂಕಣಿ, ಕರಾಡ, ಮರಾಠಿ, ಉರ್ದು, ಬ್ಯಾರಿ ಮತ್ತು ಹಳೆಯ ತಲೆಮಾರಿನ ಮಲೆಯಾಳಿಗರು ಹೊಂದಿದ್ದಾರೆ ಎಂಬುದು ಕೂಡ ಗಮನಾರ್ಹ. ‘ ಈ ಭಾಷಿಕರೆಲ್ಲ ತಂತಮ್ಮ ಮಾತೃಭಾಷೆಯನ್ನಾಡಿದರೂ ಕನ್ನಡದ ಬಗ್ಗೆ ಅಪಾರ ಅಭಿಮಾನ ಹೊಂದಿದ್ದಾರೆ. ಕನ್ನಡ ಶಾಲೆಗಳಲ್ಲಿ ಕಲಿತಿದ್ದಾರೆ. ಇವರಲ್ಲಿ ಇಂದಿಗೂ ಕನ್ನಡಾಭಿಮಾನ ಮರೆಯಾಗಿಲ್ಲ. ಇವರೆಲ್ಲರ ಮನೆ ಭಾಷೆ ಬೇರೆಯಾಗಿದ್ದರೂ ಸಂಸ್ಕೃತಿ ಮಾತ್ರ ಕನ್ನಡ. ಇದಕ್ಕೆ ಪೂರಕವಾದ ಅಂಶಗಳಿವೆ’ ಎಂದು ಕನ್ನಡ ಸಹಾಯಕ ಪ್ರಾಧ್ಯಾಪಕ ರತ್ನಕರ ಮಲ್ಲಮೂಲೆ ಹೇಳುತ್ತಾರೆ.
ಈ ಮಾತಿಗೆ ರತ್ನಕರ ಮಲ್ಲಮೂಲೆ ಅವರೇ ಜ್ವಲಂತ ನಿದರ್ಶನ. ಇವರ ಮನೆ ಭಾಷೆ ಮಲೆಯಾಳ. ಆದರೆ ಇವರು ಕಲಿತದ್ದು ಕನ್ನಡ ಶಾಲೆಯಲ್ಲಿ. ಪದವಿ-ಸ್ನಾತಕೋತ್ತರ ಪದವಿ ಪಡೆದಿದ್ದು ಕನ್ನಡದಲ್ಲಿ. ಕಾಸರಗೋಡಿನ ಸರಕಾರಿ ಕಾಲೇಜಿನಲ್ಲಿ ಕನ್ನಡದ ಸವಿರುಚಿಯನ್ನು ವಿದ್ಯಾರ್ಥಿಗಳಿಗೆ ಉಣಬಡಿಸುತ್ತಿರುವ ಇವರು ಕನ್ನಡಕ್ಕೆ ಅನ್ಯಾಯವಾದಗಲೆಲ್ಲ ಮುಂಚೂಣಿಯಲ್ಲಿ ನಿಂತು ಪ್ರತಿಭಟಿಸುತ್ತಲೇ ಬಂದಿದ್ದಾರೆ. ಕನ್ನಡವನ್ನೇ ಕಲಿತ ಮಲೆಯಾಳಿ-ಬ್ಯಾರಿ ಭಾಷಿಕರ ಸಂಖ್ಯೆ ಅಪಾರವಾಗಿದೆ.
ಈ ಎಲ್ಲ ಹಿನ್ನೆಲೆಯಲ್ಲಿ ಕನ್ನಡವನ್ನು ಕಾಸರಗೋಡಿನಿಂದ ಸಂಪೂರ್ಣವಾಗಿ ಹೊರದಬ್ಬುವ ಮಾರ್ಗವಾಗಿ ಎರಡನೇ ಭಾಷೆಯಾಗಿ ಮಲೆಯಾಳಂ ಕಡ್ಡಾಯ ಎಂಬ ಅಸ್ತ್ರವನ್ನು ಕೇರಳ ಸರಕಾರ ಪ್ರಯೋಗಿಸಿದೆ. ಇದರಿಂದ 10 ನೇ ತರಗತಿವರೆಗಿನ ವಿದ್ಯಾರ್ಥಿಗಳ ಮೇಲೆ ಮಾರಕ ಪರಿಣಾಮ ಉಂಟಾಗುತ್ತದೆ.
‘ಕೇರಳ ಸರಕಾರದ ಈ ಆದೇಶ ಕನ್ನಡಿಗರಿಗೆ ತೀವ್ರ ಆಘಾತಕಾರಿ. ಇದು ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಹಂತಹಂತವಾಗಿ ನಾಶ ಮಾಡುವ ಹುನ್ನಾರ’ ಹೀಗೆಂದು ಬದಿಯಡ್ಕದ ಬಲ್ಪು(ಬೆಳಕು) ಸಂಘಟನೆಯ ಸುಂದರ ಬಾರಡ್ಕ ಆಕ್ರೋಶದಿಂದ ನುಡಿಯುತ್ತಾರೆ.
ಕಾಸರಗೋಡು, ಬದಿಯಡ್ಕದ ಬಲ್ಪು(ಬೆಳಕು) ಸಂಘಟನೆ ಪದಾಧಿಕಾರಿಗಳು
 ಕನ್ನಡ ಶಾಲೆಗಳ ವಿದ್ಯಾರ್ಥಿಗಳು 8ನೇ ತರಗತಿಯಿಂದ ಹಿಂದಿ-ಇಂಗ್ಲೀಷ್ ಕಲಿಯಬೇಕು. ಈಗ ಇದರ ಜೊತೆಗೆ ಮಲೆಯಾಳಂ ಅನ್ನು ಕಡ್ಡಾಯವಾಗಿ ಕಲಿಯಲೇ ಬೇಕು. ಕನ್ನಡ ಭಾಷೆ ತೆಗೆದುಕೊಂಡ ತುಳು-ಮಲೆಯಾಳಿ ಭಾಷಿಕರು ಅರೇಬಿಕ್, ಉರ್ದು ಅಥವಾ ಇಂಗ್ಲೀಷನ್ನು ಐಚ್ಛಿಕವಾಗಿ ಕಲಿಯುತ್ತಿದ್ದರು. ಇಂಥವರೀಗ ಕನ್ನಡದ ಬದಲು ಮಲೆಯಾಳಂ ಅನ್ನೇ ತೆಗೆದುಕೊಳ್ಳುವಂಥ ಪರಿಸ್ಥಿತಿಯನ್ನು ಕೇರಳ ಸರಕಾರ ನಿರ್ಮಾಣ ಮಾಡಿದೆ.
ಇವೆಲ್ಲದರಿಂದ ಆಗಲಿರುವ ಅಪಾಯಗಳ ಪಟ್ಟಿ ದೊಡ್ಡದಿದೆ. ಇದಲ್ಲದೇ ದೈನಂದಿನ ವ್ಯವಹಾರದಲ್ಲಿಯೂ ಕನ್ನಡವನ್ನು ಕಡೆಗಣಿಸಿ, ಹೊರದೂಡುವ ಕಾರ್ಯವನ್ನು ಕೇರಳ ಸರಕಾರ ಅತ್ಯಂತ ವ್ಯವಸ್ಥಿತವಾಗಿ ಮಾಡಿದೆ. ಮಾಡುತ್ತಲಿದೆ. ನಾವು ಎಚ್ಚತ್ತುಕೊಳ್ಳದಿದ್ದರೆ ಮುಂದೆಯೂ ಮಾಡುತ್ತದೆ. ಈ ಕುರಿತು ಬರೆಯುತ್ತೇನೆ.
 ‘ಕಾಸರಗೋಡು ಕನ್ನಡಿಗರ ಹೋರಾಟ ಮತ್ತು ಬಲಿದಾನಗಳನ್ನು ಕರ್ನಾಟಕ ಸರ್ಕಾರ ಮರೆತಿದೆಯೇ’...? ಎಂಬ ಲೇಖನವನ್ನು ಕೆಲ ತಿಂಗಳ ಹಿಂದೆ ಬರೆದಿದೆ. ಇದನ್ನು ಕೂಡ ಗಮನಿಸಲು ಕೋರಿಕೆ. ಅದರ ಲಿಂಕ್ ಕೊಟ್ಟಿದ್ದೇನೆ.

Comments

  1. ಇನ್ನಾದರೂ ಕನ್ನಡಿಗರೆಲ್ಲ ಎಚ್ಚೆತ್ತುಕೊಳ್ಳಬೇಕು, ನಮ್ಮ ಸರ್ಕಾರವು ಎಚ್ಚೆತ್ತುಕೊಂಡು ಸ್ವಲ್ಪ ಗಮನಹರಿಸಬೇಕಿದೆ.

    ReplyDelete
  2. ಮಲಯಾಳ ಭಾಷೆ, ಸಾಹಿತ್ಯದ ಬಗ್ಗೆ ನನಗೆ ಗೌರವವಿದೆ. ಕಾಸರಗೋಡಿನ ಹಳೆಯ ತಲೆಮಾರಿನ ಮತ್ತು ಇಂದಿನ ಹಲವರು ಸ್ಥಳೀಯ ಮಲಯಾಳಿಗಳು ಇಲ್ಲಿನ ತುಳು ಕನ್ನಡ ಮೊದಲಾದ ಸ್ಥಳೀಯ ಸಾಂಸ್ಕೃತಿಕ ವೈವಿಧ್ಯವನ್ನು ಗೌರವಿಸುತ್ತಾರೆ.ಆದರೆ ವಲಸೆ ಬಂದ ಬರುತ್ತಿರುವ ತೆಂಕಣದ ಮಲಯಾಳಿಗಳಿಗೆ ಕಾಸರಗೋಡಿನ ಬಗ್ಗೆ ಪ್ರೀತಿ ಇಲ್ಲ.ಇಲ್ಲಿನ ಭಾಷಾ ಸಾಮರಸ್ಯವನ್ನು ನಾಶ ಮಾಡುವವರು ಅವರೇ .ಇವರಲ್ಲಿ ಭಾಷಾಂಧ ಅಧಿಕಾರಿಗಳು ಸ್ಥಳೀಯ ಭಾಷೆ ಸಂಸ್ಕೃತಿಗಳನ್ನು ಕೀಳಾಗಿ ಕಾಣುತ್ತಾರೆ.ಸ್ತಳೀಯ ಭಾಷೆಗಳನ್ನು ಕಲಿಯುವುದೂ ಇಲ್ಲ.ಮಲಯಾಳದ ಬಲಾತ್ಕಾರ ಹೇರಿಕೆಯಿಂದ ಕನ್ನಡಕ್ಕೆ ಮಾತ್ರ ಅಪಾಯ ಅಲ್ಲ.ಕಾಸರಗೋಡನ್ನು ಕಳೆದು ಕೊಂಡರೆ ಕರ್ನಾಟಕದ ಕನ್ನಡಿಗರಿಗಿಂತಲೂ ತುಳುವರಿಗೆ ಹೆಚ್ಚು ನಸ್ಟ. ಚಂದ್ರಗಿರಿ ನದಿಯಾಚೆ ತುಳು ಕೊಂಕಣಿ ಭಾಷೆಗಳು ಮಲಯಾಳದ ಪ್ರಭಾವದಿಂದ ಹೆಚ್ಚು ಕಡಿಮೆ ಅಳಿದು ಹೋಗಿವೆ.ಕನ್ನಡ ಪ್ರಭಾವವಿರುವ ಉತ್ತರ ಕಾಸರಗೋಡು, ಮಂಜೇಶ್ವರ ದಕ್ಷಿಣ ಕನ್ನಡ ಉಡುಪಿಗಳಲ್ಲಿ ತುಳು ವ್ಯಾವಹಾರಿಕವಾಗಿ ಉಳಿದಿದೆ. ಮಲಯಾಳ ಪರ್ಥೆನಿಯಂ ಗಿಡದ ಹಾಗೆ. ಅದು ಇರುವಲ್ಲಿ ಬೇರೆ ಭಾಷೆಗಳು ಮರೆಯಾಗುತ್ತವೆ. ತೆಂಕಣದ ಮಲಯಾಳಿಗಳು ಇತರ ಭಾಷೆ ಕಲಿಯುವುದಿಲ್ಲ.ಇತರ ಸಂಸ್ಕೃತಿಗಳ ಜತೆ ಹೊಂದಾಣಿಕೆ ಇರದ ಹಟಮಾರಿಗಳು. ಕಾಸರಗೋಡಿನ ಬಹುಭಾಷೆ ಸಾಂಸ್ಕೃತಿಕ ವೈವಿಧ್ಯ ಜಾನಪದ ಐತಿಹ್ಯ ವಿಶಿಸ್ತತೆ ನಾಶವಾಗಲು ಇನ್ನು ಹೆಚ್ಚು ಕಾಲ ಬೇಡ.ತುಳು ಅಕಾಡಮಿ ಒಂದು ಮೋಸ ಮತ್ತು ಕನ್ನಡಿಗ-ತುಳುವರನ್ನು ಒಡೆಯುವ ತಂತ್ರ.ಇದೀಗ ಉರ್ದು, ಕನ್ನಡ ಕೊಂಕಣಿ ಅಕಾಡಮಿ ಗಳಿಗೆ ಬೇಡಿಕೆ ಬರುತ್ತಿದೆ. ಅಕಾಡಮಿ ಗಳಿಂದ ಸಾಮಾನ್ಯ ಕನ್ನಡಿಗ ತುಳು ಕೊಂಕಣಿ ಉರ್ದು ಭಾಷಿಗರ ಕನ್ನಡ ಕಲಿತವರ ಶೈಕ್ಷಣಿಕ ಔದ್ಯೋಗಿಕ ವ್ಯಾವಹಾರಿಕ ಸಮಸ್ಯೆಗಳು ಬಗೆಹರಿಯುವುದಿಲ್ಲ.ಮಲಯಾಳ ಹೇರಿಕೆಯಿಂದ ಕನ್ನಡ ಶಾಲೆಗಳು ಕನ್ನಡ ಕಲಿತವರ ಉದ್ಯೋಗಾವಕಾಶ ಕ್ರಮೇಣ ಕೊನೆಗೊಳ್ಳುತ್ತದೆ.ವಿದ್ಯರ್ತಿಗಳಿಗೆ ಸಮಸ್ಯೆಯಾಗುತ್ತದೆ. ಕನ್ನಡ ಶಾಲೆಗಳಿಗೆ ಕನ್ನಡದ ಗಂಧಗಾಳಿ ಇಲ್ಲದ ಅಧ್ಯಾಪಕರನ್ನು ನೆಮಿಸುತ್ತಿರುವ ಕೇರಳ ಸರಕಾರ ಕನ್ನಡ ಶಾಲೆಗಳನ್ನು ನಿರ್ನಾಮ ಮಾಡಲು ಸಂಚು ಹೂಡಿದೆ

    ReplyDelete
  3. ಏಕಿಕರಣ ಹೋರಾಟದಲ್ಲಿ ಮೂಚೂಂಣಿಯಲ್ಲಿದ್ದ ಕಾಸರಗೋಡು ಕನ್ನಡಿಗರ ನೋವು ಈಗ ಅರಣ್ಯ ರೋದನವಾಗಿದೆ.ಇದೀಗ ಯಾವ ಕನ್ನಡ ಸಂಘಟನೆಗಳಿಗೂ ಬೇಡವಾದ ವಿಷಯವಾಗಿದೆ.
    ಕಾಸರಗೋಡಿನ ಕನ್ನಡಿಗರ ನೋವಿಗೆ ದನಿಯಾಗಬೇಕಾದದ್ದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ...

    ReplyDelete
  4. kannada para kalakali,
    kalakaiyaage vuliyuvudeno.. emba bhidiyu kaaduttide.nimma kaalajige nammadu daniyide.abhinandanegalu.

    ReplyDelete
  5. ಯಾರು ಈ ಕಥೆಗೆ ಕಿವಿಗೊಡುವವರು ?
    ಯಾರು ಹೆರಿಗೆಬೇನೆಗೆ ಹೆಗಲುಕೊಡುವವರು ?
    ಯಾರು ಈ ಎದೆಬಾವಿಗೆ ಎದೆಕೊಡುವವರು ?
    ಯಾರು ಕನ್ನಡಕ್ಕೆ ಕೈ ಎತ್ತುವವರು ?
    ಯಾರು ಕನ್ನಡಕ್ಕೆ ಕಟಿಬದ್ಧರಾಗುವವರು ?
    ದರಿದ್ರ ರಾಜಕಾರಣಿಗಳು, ಹೊಲಸು ಬಿಳಿಧಾರಿಗಳು,,,!!??

    ReplyDelete
  6. Kasaragod is part of Kerala now, You have to learn Malayalam, But it is upto you u want to keep kannada culture or not !! If I respect other's mother, then only my mother will get respect !! Jai Karnataka Maathe..

    ReplyDelete
  7. ನಾವೆಲ್ಲರೂ ಭಾರತ ದೇಶದಲ್ಲಿದ್ದೇವೆ.ನಮ್ಮಲ್ಲಿ ಎಷ್ಟು ಮಂದಿ ಹಿಂದೀ ಕಲಿಯುತ್ತೇವೆ ಅಥವಾ ಅದರಲ್ಲಿ ವ್ಯವಹರಿಸುತ್ತೇವೆ? ನಮ್ಮ ಬದುಕನ್ನು ಹಿಂದೀ ಬಾಧಿಸುತ್ತಿಲ್ಲ ಅಲ್ಲವೇ? ಹಾಗಿದ್ದ ಮೇಲೆ ನಾವು ಕಾಸರಗೊಡಿಗರು ನಮ್ಮದಲ್ಲದ ತಪ್ಪಿಗೆ ಕೇರಳಕ್ಕೆ ಸೇರಿದ ಮಾತ್ರಕ್ಕೆ ಮಲಯಾಳವನ್ನು ಕಡ್ಡಾಯವಾಗಿ ಯಾಕೆ ಕಲಿಯಬೇಕು? ನಾವು ಇಲ್ಲಿಗೆ ವಲಸೆ ಬಂದವರಲ್ಲ.ಪ್ರಜಾವಾಣಿಯಲ್ಲಿ ವೈದೇಹಿಯವರು ಬರೆದ ಭಾನುವಾರದ ಅಂಕಣ ದಯವಿಟ್ಟು ಗಮನಿಸಿ.ಬೆಲ್ಜಿಯಂ ನಂತಹ ಬಹುಭಾಷ ಸಂಸ್ಕೃತಿಯ ದೇಶಗಳಲ್ಲಿ ಎಲ್ಲ ಭಾಷೆಗಳಲ್ಲೂ ವ್ಯವಹರಿಸಬಹುದಾದ ಅವಕಾಶವಿದೆ. ನಮ್ಮಲ್ಲಿ ಎಲ್ಲ ಧರ್ಮದವರಿಗೆ ಅವರವರ ಅಚಾರ ವಿಚಾರಗಳೊಂದಿಗೆ ಬದುಕುವ ಹಕ್ಕಿದೆ. ಹಿಂದೂ ಗಳು ಬಹುಸಂಖ್ಯಾತರೆಂದು ಅವರ ನೀತಿ ನಿಯಮಗಳನ್ನು ಅಲ್ಪಸಂಖ್ಯಾತ ಧರ್ಮದವರ ಮೇಲೆ ಹೆರುವ ಹಾಗಿಲ್ಲ. ನಮ್ಮನ್ನೂ ನಮ್ಮ ಭಾಷೆ ಸಂಸ್ಕೃತಿ ಗಳೊಂದಿಗೆ ಬದುಕಲು ಬಿಡಿ.ಕಾಸರಗೋಡಿನಲ್ಲಿ ಸ್ಥಳನಾಮಗಳನ್ನೂ ಕನ್ನಡಿಗರ ಹೆಸರನ್ನೂ ಕೂಡ ಮಲಯಾಲೀಕರಿಸುತ್ತಿದ್ದಾರೆ. ಇಲ್ಲಿನ ಮಲಯಾಳಿಗಳಿಗೆ ಕನ್ನಡಿಗರನ್ನು ಕಂಡರೆ ಎಷ್ಟು ಅಸಡ್ಡೆ ಎಂದರೆ ಕನ್ನಡಿಗರ ಬಗ್ಗೆ ಒಂದು ವಾರ್ತೆಯನ್ನೂ ಮಲಯಾಳ ಮಾಧ್ಯಮದವರು ಪ್ರಕಟಿಸುವುದಿಲ್ಲ.ಕರ್ನಾಟಕ ದವರಿಗೂ ನಾವು ಹೊರಗಿನವರು! ನಾವು ಎಲ್ಲ ಭಾಷೆಗಳನ್ನೂ ಗೌರವಿಸುತ್ತೇವೆ. ಮಾತನಾಡುತ್ತೇವೆ.ಎಲ್ಲ ಸಣ್ಣ ಪುಟ್ಟ ಭಾಷಾ ವೈವಿಧ್ಯಗಳನ್ನೂ ಉಳಿಸುತ್ತಿದ್ದೇವೆ.ಆದ್ರೆ ಇಲ್ಲಿಗೆ ವಲಸೆ ಬರುವ ಮಲಯಾಳಿಗಳಿಗೆ ಕನ್ನಡ ತುಳು ಅಂದರೆ ತಾತ್ಸಾರ.IF I RESPECT OTHERS MOTHER ...ಎಂದು ಕಾಮೆಂಟ್ ಮಾಡಿದವರು ಯಾರನ್ನು ಉದ್ದೆಶಿಸಿದ್ದಾರೋ ಗೊತ್ತಿಲ್ಲ.ಕಾಸರಗೋಡು ಕನ್ನಡಿಗರಿಗೆ ಪರಭಾಷಾಸೌಹಾರ್ದದ ಪಾಠ ಯಾರೂ ಹೇಳಿಕೊದಬೇಕಾಗಿಲ್ಲ. ನಾವು ಅಹಿಂಸಾತ್ಮಕವಾಗಿ ಹೋರಾಡುತ್ತಿದ್ದೇವೆ.ನೀವು ಕನ್ನಡಿಗರಾಗಿದ್ದರೆ ನಮ್ಮ ಸ್ಥಿತಿಯಲ್ಲಿ ನೀವಿದ್ದಿದ್ದರೆ ಇಲ್ಲಿ ಕನ್ನಡ ಉಳಿಸುವ ಕಷ್ಟ ಅರ್ಥವಾಗುತ್ತಿತ್ತು.

    ReplyDelete
  8. I really appreciate your comments, but if u look at belagaum (belagavi) people struggle for the same language issues. obviously they are marati people & still they learn Kannada & live in Kannada. For me Belagaum & Kasaragod are same. If my comments are hurted you , then m extremely sorry.

    Regards,
    Shr

    ReplyDelete

Post a Comment

Popular posts from this blog

ಹೆಣ್ಣೆ, ನಿನ್ನ ಮತ್ತೊಂದು ಹೆಸರು ಚಂಚಲತೆಯೆ............?

'ಸನ್ ಮ್ಯೂಸಿಕ್' ವಾಹಿನಿಯಲ್ಲಿ 'ವಿನ್ನೈತಾಂಡಿ ವರುವಯ' ಚಿತ್ರದ ಹಾಡುಗಳು ಜನಪ್ರಿಯ. ಇವುಗಳನ್ನು ಆಗಾಗ ನೋಡುತ್ತಿದ್ದೆನಾದರೂ ಚಿತ್ರ ವೀಕ್ಷಿಸಿರಲಿಲ್ಲ.  ಮೊನ್ನೆ  ಈ ಚಿತ್ರದ ಡಿವಿಡಿ  ತಂದು ನೋಡಿದೆ. ಮೊದಲಿಗೆ ಇಡೀ ಚಿತ್ರದ ವ್ಯಾಕರಣ ಹೊಸತನವಿದೆ ಎನಿಸಿತು. ಇಡೀ ಚಿತ್ರವನ್ನು ಪ್ರೆಸೆಂಟ್ ಮಾಡಿರುವ ರೀತಿ ಬಗ್ಗೆ ಮೆಚ್ಚುಗೆ ಮೂಡಿತು. ಇವೆಲ್ಲದರ ಜೊತೆಗೆ ಕಥೆಯ ಹೂರಣ ಕೂಡ ವಿಭಿನ್ನವಾಗಿದೆ. ಫ್ಲಾಷ್ ಬ್ಯಾಕಿನ ಮೂಲಕ ಇಡೀ ಸ್ಟೋರಿಯನ್ನು ಕಥಾ ನಾಯಕ ನಿರೂಪಿಸುತ್ತಾ ಹೋಗುತ್ತಾನೆ. ಕಥಾ ನಾಯಕ ಕಾರ್ತಿಕ್ (ಸಿಂಬರಸನ್) ಇಂಜಿನಿಯರ್. ಆದರೀತನಿಗೆ ಸಿನೆಮಾ ಬಗ್ಗೆ ತೀವ್ರ ಆಸಕ್ತಿ. ಸ್ನೇಹಿತರ ಮೂಲಕ ಪರಿಚಯವಾದ  ಸಿನಿಮಾ ಕ್ಯಾಮರಾಮನ್ ಗಣೇಶ್(ಗಣೇಶ್) ತಮ್ಮ ಪ್ರಭಾವ ಬಳಸಿ ಖ್ಯಾತ ನಿರ್ದೇಶಕರ ಬಳಿ ಸಹಾಯಕ ನಿರ್ದೇಶಕರಾಗಿ ಸೇರಿಸುತ್ತಾರೆ. ಒಮ್ಮೆ ತಾವಿರುವ ಬಾಡಿಗೆ ಮನೆ ಗೇಟಿನ ಬಳಿ ಕಾರ್ತೀಕ್ ನಿಂತಿದ್ದಾಗ ಸೀರೆಯುಟ್ಟ ಯುವತಿಯೋರ್ವಳು ತೀರಾ ಬೇಗವೂ ಅಲ್ಲದ ನಿಧಾನವೂ ಅಲ್ಲದ ರೀತಿ ನಡೆದು ಬರುತ್ತಿರುವುದನ್ನು ನೋಡುತ್ತಾನೆ. ನೋಡುತ್ತಾ ನೋಡುತ್ತಾ ಈತನ ಕಣ್ಣುಗಳಲ್ಲಿ ಮಿಂಚು. 'love at first sight' ಭಾವನೆ. ಆಕೆ ಗೇಟ್ ತೆರೆದು ಈತನಿರುವ ಮನೆಯ ಮೊದಲ ಮಹಡಿಗೆ ತೆರಳುತ್ತಾನೆ. ಬಳಿಕ ಈತನ ಸಹೋದರಿ ಮೂಲಕ ಆಕೆ, ಮಲೆಯಾಳಿ ಮನೆ ಮಾಲೀಕರ ಮಗಳು ಜೆಸ್ಸಿ (ತ್ರಿಷಾ) ಎನ್ನುವುದು ತಿಳಿದು ಬರುತ್ತದೆ.

ಕಾಸರಗೋಡು ಕನ್ನಡಿಗರ ಹೋರಾಟ ಮತ್ತು ಬಲಿದಾನಗಳನ್ನು ಕರ್ನಾಟಕ ಸರ್ಕಾರ ಮರೆತಿದೆಯೇ...?

" ಕಾಸರಗೋಡು, ಕರ್ನಾಟಕದ ಕನ್ಯಾಕುಮಾರಿ. ಉತ್ತರದಲ್ಲಿ ಬೆಳಗಾವಿ, ಬಳ್ಳಾರಿಗಳಂತೆ ದಕ್ಷಿಣ ಕನ್ನಡದಲ್ಲಿ ನಮ್ಮದು ಕರ್ನಾಟಕದ ಕನ್ಯಾಕುಮಾರಿ. ಕನ್ನಡನಾಡಿನ ಈ ತೆಂಕಣ ಬಾಗಿಲನ್ನು ತೆರೆದಿಟ್ಟು ಕನ್ನಡಿಗರು ಎಚ್ಚರತಪ್ಪಿ ನಿದ್ರೆ ಹೋದುದ್ದೇ ಆದರೆ ನಮ್ಮ ಜನರಿಗೂ, ನಮ್ಮ ನಾಡಿಗೂ ಅಮೂಲ್ಯವಾದ ಕನ್ನಡ ಸಂಸ್ಕೃತಿಗೂ ಪ್ರಮಾದ ಒದಗುವುದರಲ್ಲಿ ಸಂಶಯವಿಲ್ಲ. ವಿಶಾಲ ಕೇರಳ ಚಳವಳಿಯು ಆರಂಭವಾಗಿ ಹತ್ತು ವರ್ಷಗಳು ಸಂದುಹೋದವು. ದಕ್ಷಿಣ ಕನ್ನಡ, ಕೊಡಗು, ನೀಲಗಿರಿ ಜಿಲ್ಲೆಗಳು ಮಲಬಾರಿನೊಂದಿಗೆ ಜತೆಗೊಂಡು ಕೇರಳ ಸಂಸ್ಥಾನ ಅಥವಾ ಪಶ್ಚಿಮ ಪ್ರಾಂತ ಸಂಸ್ಥಾನವೊಂದು ನಿರ್ಮಾಣವಾಗಬೇಕೆಂದು ಈ ಚಳವಳಿಯು ಪ್ರಬಲವಾಗುತ್ತಾ ನಡೆದಿದೆ. ಈ ಚಳವಳಿಯ ಮರ್ಮವನ್ನು ತಿಳಿದುಕೊಂಡು ಕನ್ನಡಿಗರು ಅದನ್ನು ಸಕಾಲದಲ್ಲಿಯೇ ಪ್ರತಿಭಟಿಸದೇ ಹೋದರೆ ಸ್ವಲ್ಪಕಾಲದೊಳಗಾಗಿಯೇ ದಕ್ಷಿಣ ಕನ್ನಡ ಜಿಲ್ಲೆಯ ಕಾಸರಗೋಡಾದರೂ ಮಲಬಾರಿನವರ ಮಡಿಲಿಗೆ ಬೀಳಬೇಕಾಗಬಹುದು" ¨sÁµÁªÁgÀÄ ¥ÁæAvÀå gÀZÀ£ÉAiÀiÁUÀĪÀÅzÀPÀÆÌ MA¨sÀvÀÄÛ ªÀµÀðUÀ½UÀÆ ªÉÆzÀ¯Éà ²æÃzsÀgÀ PÀQ̯ÁAiÀÄgÀÄ ºÉýzÀÝ RavÀ C©ü¥ÁæAiÀÄ«zÀÄ. EªÀgÀÄ PÁ¸ÀgÀUÉÆÃr£À ¸ÀÄ¥Àæ¹zÀÞ ªÀQîgÁVzÀÝgÀÄ. PÁ¸ÀgÀUÉÆÃqÀ£ÀÄß PÀ£ÁðlPÀPÉÌ ¸ÉÃ¥ÀðqÉUÉƽ¸À®Ä ¸ÀvÀvÀ 25 ªÀµÀð ºÉÆÃgÁl ªÀiÁrzÀgÀÄ. CªÀgÀ fëvÁªÀ¢üAiÀĪÀgÉUÀÆ F ºÉÆÃgÁlzÀ°è ¸ÀQæAiÀÄgÁVzÀÝgÀÄ. 1947g