Skip to main content

ಕಪ್ಪಾಗಿದ್ದರೆ ಕೊರಗೇಕೆ....?

ಟಿ.ವಿ.ಚಾನಲ್ ಗಳ ಸುದ್ದಿವಾಚಕಿಯರ ಮೇಕಪ್ ಹೆಚ್ಚಾಗಿರುತ್ತದೆ.ಅದರಲ್ಲೂ ಪ್ರಾಂತೀಯ ಭಾಷೆಗಳವರಲ್ಲಿ ಮೇಕಪ್ ಮತ್ತಷ್ಟು ಹೆಚ್ಚಾಗಿರುತ್ತದೆ.

ಕಪ್ಪಗಿರುವ ವಾಚಕಿಯರಂತು ಮುಂಗೈಗೂ ಮೇಕಪ್ ಮಾಡಿಸಿಕೊಂಡಿರುತ್ತಾರೆ.ಆದರೆ ಇವರ ಕುತ್ತಿಗೆ,ಕಿವಿಗಳಿಗೆ ಮೇಕಪ್ ಟಚ್ ಕೊಡುವುದನ್ನು ಮೇಕಪ್ ಮ್ಯಾನ್ ಮರೆತಿರುತ್ತಾನೆ. ಇದರಿಂದ
ಸ್ಟುಡಿಯೋದ ಪ್ರಖರ ಬೆಳಕಿನಲ್ಲಿ ಈ ವಾಚಕಿಯರು ವಿಚಿತ್ರವಾಗಿ ಕಾಣುತ್ತಿರುತ್ತಾರೆ.ಅದರಲ್ಲೂ ಕ್ಯಾಮರಾ ಕ್ಲೋಸ್ ಅಪ್ ತುಸು ಹೆಚ್ಚಾಗಿದ್ದರಂತೂ ಇನ್ನೂ ಅಸಹಜತೆ. .ಇಂಥ ವಾಚಕಿಯರು ಲೋಕಾಭಿರಾಮವಾಗಿ ಮಾತನಾಡುವಾಗ "ಅಯ್ಯೋ ತಾವು ಬೆಳ್ಳಗಿರಬೇಕಿತ್ತು ಎಂದು ಕೊರಗುತ್ತಿರುತ್ತಾರೆ.ಇಂಥದ್ದೇ ಮನೋಭಾವ ವಾರ್ತಾವಾಚಕಿಯರ ಆಯ್ಕೆಸಮಿತಿ ನಿರ್ಣಾಯಕರಿಗೆ ಇದ್ದಿದ್ದರೆ ಕಪ್ಪನೆಯವರು ಖಂಡಿತಾ ಆಯ್ಕೆಯಾಗುತ್ತಿರಲ್ಲಿಲ್ಲ ಎಂಬ ಸಂಗತಿಯನ್ನಿವರು ಮರೆತಿರುತ್ತಾರೆ.ನಿಜಕ್ಕೂ ಈ ವಾರ್ತಾ ವಾಚಕಿಯರು ಆಕರ್ಷಕವಾಗಿಯೇ ಇರುತ್ತಾರೆ.ಆದರೂ ಕೀಳಿರಿಮೆ

ಕಪ್ಪಾಗಿದ್ದರೆ ಕೊರಗುವ ಮನೋಭಾವ ಭಾರತೀಯರಲ್ಲಿ ಎಂದಿನಿಂದ ಪ್ರಾರಂಭವಾಯಿತು ಎಂಬುದೇ ದೊಡ್ಡ ಪ್ರಶ್ನೆ.ಈ ಪ್ರವೃತ್ತಿಯಿಂದ ತಾವ್ಯಾಕೆ ಹೀಗೆ ಹುಟ್ಟಿದೆವೋ ಎಂಬಷ್ಟು ಕೀಳರಿಮೆ ಕಪ್ಪನೆ ಹೆಣ್ಣುಗಳಲ್ಲಿ ಮನೆಮಾಡಿರುತ್ತದೆ.ಇವರಿಗೆ ಹೋಲಿಸಿದರೆ ಕಪ್ಪನೆ ಗಂಡುಗಳಲ್ಲಿ ಇಂಥ ಕೀಳಿರಿಮೆ ಕಡಿಮೆ.ಇದು ಹೆಣ್ಣು-ಗಂಡಿನ ಕುರಿತ ಭಾರತಿಯ ಸಮಾಜದ ಪೂರ್ವಾಗ್ರಹ ಪೀಡಿತ ಭಾವನೆಗೂ ನಿದರ್ಶನ.ಸಾಮಾನ್ಯವಾಗಿ ಹೆಣ್ಣೆತ್ತವರು ಅಂತಿಮವಾಗಿ ಯೋಚಿಸುವುದು, ಆಕೆ ಮದುವೆ ಕುರಿತೆ.ಕಪ್ಪಗಿರುವವಳನ್ನು ಮದುವೆ ಮಾಡಿಕಳುಹಿಸುವುದು ಕಷ್ಟ;ವರದಕ್ಷಿಣೆ ಹೆಚ್ಚು ತೆರಬೇಕು ಎಂಬೆಲ್ಲ ಚಿಂತೆ. ಕಪ್ಪಾಗಿರುವವರು ಚೆನ್ನಾಗಿರುವುದಿಲ್ಲ ಎಂಬಷ್ಟು ಮಟ್ಟಿಗೆ ಪೂರ್ವಗ್ರಹಪೀಡಿತ ಮನೋಭಾವ

ಪ್ರಾಚೀನ ಭಾರತೀಯರು ಖಂಡಿತಾ ಇಂಥ ಬಣ್ಣ ಪೂರ್ವಾಗ್ರಹಪೀಡಿತರಾಗಿರಲ್ಲಿಲ್ಲ.ಬಹುಶಃ ಬ್ರಿಟಿಷರು ಇಲ್ಲಿ ತಮ್ಮ ಪ್ರಭಾವ ಮೊಡಿಸುವವರೆಗೂ ಇಂಥದೊಂದು ಪೂರ್ವಾಗ್ರಹ ಇದ್ದಿರಲ್ಲಿಕ್ಕಿಲ್ಲ.ಪ್ರಾಚೀನ ಭಾರತೀಯರಂತೂ ಸೌಂದರ್ಯಕ್ಕೂ, ಬಣ್ಣಕ್ಕೂ ಸಂಬಂಧವನ್ನೇ ಕಲ್ಪಿಸಿರಲಿಲ್ಲ.ಇದಕ್ಕೆ ಅತ್ಯುತ್ತಮ ನಿದರ್ಶನ ಶಿವ,ಕೃಷ್ಣ,ರಾಮ ಮತ್ತು ದ್ರೌಪತಿ

ಪಾಂಚಾಲ ರಾಜ್ಯದ ಮಹಾರಾಜ ಯಜ್ಞಸೇನ(ದ್ರುಪದ)ಮಹಾರಾಜನ ಮಗಳಾದ ದ್ರೌಪದಿ ಜಗದೇಕ ಸುಂದರಿ.ಈಕೆಗೆ ಕೃಷ್ಣೆ,ಪಾಂಚಾಲಿ ಎಂಬ ಹೆಸರುಗಳೂ ಇವೆ.ಕಪ್ಪಗಿದ್ದ ಕಾರಣಕ್ಕೆ ಕೃಷ್ಣೆ ಎಂಬ ಹೆಸರು ಬಂದಿದೆ.ಈಕೆಯ ಅದ್ವೀತಿಯ ಸೌಂದರ್ಯದ ವರ್ಣನೆ ಇತರ ರಾಜ್ಯ,ದೇಶಗಳಲ್ಲಿ ಹರಡಿರುತ್ತದೆ.ಅಲ್ಲಿಯ ರಾಜ-ಮಹಾರಾಜರು ಈಕೆಯನ್ನು ವರಿಸಲು ತುದಿಗಾಲಿನಲ್ಲಿ ನಿಂತಿರುತ್ತಾರೆ.ಆದರೆ ದ್ರುಪದ ಮಹಾರಾಜನಿಗೆ ಕೃಷ್ಣೆಯನ್ನು ಅರ್ಜುನನಿಗೆ ಕೊಟ್ಟು ಮದುವೆ ಮಾಡಬೇಕೆನ್ನುವ ಆಕಾಂಕ್ಷೆ.ಪಾಂಡವರು ಅರಗಿನ ಅರಮನೆಯಿಂದ ಪಾರಾಗಿ,ಕೌರವರ ಕಡೆಯ ಹಂತಕ ಪಡೆಗೆ ಸಿಲುಕಬಾರದೆನ್ನುವ ಕಾರಣಕ್ಕೆ ವೇಷಧಾರಿಗಳಾಗಿರುತ್ತಾರೆ.ಇವರೆಲ್ಲರು ಪಾಂಚಾಲ(ಕನೌಜ್ ಪ್ರಾಂತ್ಯ)ರಾಜ್ಯದ ರಾಜಧಾನಿ ಸಮೀಪ ಬ್ರಾಹ್ಣಣ ವೇಷಧಾರಿಗಳಾಗಿ ಇರುತ್ತಾರೆ.

ಇದೇ ಸಂದರ್ಭದಲ್ಲಿ ದ್ರುಪದ ಮಹಾರಾಜ,ದ್ರೌಪದಿ ಸ್ವಯಂವರ ಏರ್ಪಡಿಸಿರುತ್ತಾನೆ.ಮುಖ್ಯರಾದ ರಾಜಮಹಾರಾಜರಿಗೆ ಆಮಂತ್ರಣ ಹೋಗಿ ಅವರೆಲ್ಲರೂ ಆಗಮಿಸಿರುತ್ತಾರೆ.ಎಲ್ಲರೂ ದ್ರೌಪದಿ ನಿರೀಕ್ಷೆಯಲ್ಲಿರುತ್ತಾರೆ.ಬ್ರಾಹ್ಣಣರ ಮಧ್ಯದಲ್ಲಿ ಪಾಂಡವರು ಕುಳಿತಿರುತ್ತಾರೆ.ಆಗ ಯುವರಾಜ ಧೃಷ್ಟದ್ಯುಮ್ನ ತನ್ನ ಸಹೋದರಿಕರೆದುಕೊಂಡು ಸಭಾಮಂಟಪಕ್ಕೆ ಬರುತ್ತಾನೆ. ದ್ರೌಪದಿಯ ಅನುಪಮ ಸೌಂದರ್ಯ ನೋಡಿದವರೆಲ್ಲರೂ ಪಡೆದರೆ ಇಂಥ ಸುಂದರಿಯನ್ನು ಪತ್ನಿಯಾಗಿ ಪಡೆಯಬೇಕು ಎಂದುಕೊಳ್ಳುತ್ತಾರೆ.ಮೊದಲು ಧೃಷ್ಟದ್ಯುಮ್ನ ತನ್ನ ಸಹೋದರಿಗೆ ಅಲ್ಲಿ ನೆರೆದಿದ್ದ ವಧು ಆಕಾಂಕ್ಷಿ ಪ್ರಮುಖರ ಪರಿಚಯ ಮಾಡಿಕೊಡುತ್ತಾನೆ.

"ಕೃಷ್ಣೆ,ಈತ ದುರ್ಯೋಧನ,ಯುಯುತ್ಸು,ಶಲ್ಯ,ವಿರಾಟ,ಬಲರಾಮ.....ನಂತರ ಸಭೆಯನ್ನುದ್ದೇಶಿಸಿ,""ಈ ಬಿಲ್ಲಿನ ಹೆದೆಯೇರಿಸಿ, ಎತ್ತರದ ಸ್ತಂಭದ ಮೇಲಿರುವ ಚಲಿಸುತ್ತಿರುವ ಚಕ್ರದಚಲಿಸುತ್ತಿರುವ ಚಕ್ರದ ಹಿಂಭಾಗದಲ್ಲಿರುವ ಲಕ್ಷ್ಯ ಭೇದಿಸಬೇಕು"ಎನ್ನುತ್ತಾನೆ.ಅಲ್ಲಿರುವ ಭಾರಿ ಬಿಲ್ಲನ್ನು ನೋಡುತ್ತಿದಂತೆಯೇ ಹಲವರ ಉತ್ಸಾಹ ಠುಸ್ಸೆನ್ನುತ್ತದೆ.ಕೆಲವರು ಹುರುಪಿನಿಂದ ಮುಂದೆ ಬಂದು,ಬಿಲ್ಲಿನ ಹೇದೆಯೇರಿಸಲೂ ವಿಫಲರಾಗುತ್ತಾರೆ.ಈ ಪ್ರಯತ್ನದಲ್ಲಿ ಕೆಳಗೆ ಬಿದ್ದು ನಗೆಪಾಟಲಿಗೀಡಾಗುತ್ತಾರೆ.ಈ ಸಂದರ್ಭದಲ್ಲಿ ಬ್ರಾಹ್ಣಣರ ಮಧ್ಯದಿಂದ ಅರ್ಜುನ ಎದ್ದುನಿಲ್ಲುತ್ತಾನೆ.ಭಾರಿ ಬಿಲ್ಲನ್ನಿಟ್ಟ ರಂಗಕ್ಕೆ ಹೋಗುತ್ತಿದಂತೆ ಕೋಲಾಹಲ.

ಕ್ಷತ್ರೀಯರ ಕೈಲಾಗದ್ದನ್ನು ಈ ಬ್ರಾಹ್ಣಣ ಮಾಡಿಯನೇ ಎಂದು.ಇವರೆಲ್ಲರ ಅನಿಸಿಕೆ ಸುಳ್ಳುಮಾಡುವ ಅರ್ಜುನ ನಿರಾಯಾಸವಾಗಿ ಪಂಥ ಗೆಲ್ಲುತ್ತಾನೆ.ದ್ರೌಪದಿ ಹಸನ್ಮುಖಿಯಾಗಿ ಮಾಲೆ ಹಾಕುತ್ತಾಳೆ. ಕ್ಷತ್ರೀಯರ ಗುಂಪಿನಲ್ಲಿ ಗೌಜು-ಗದ್ದಲ ಪ್ರಾರಂಭ.ಇಂಥ "ಸ್ತ್ರಿರತ್ನ" ಪಡೆಯಲು ಏರ್ಪಡಿಸಿರುವ ಸ್ವಯಂವರದಲ್ಲಿ ಬ್ರಾಹ್ಣಣನಿಗೇನು ಕೆಲಸ ಎಂದು ಕೂಗಾಡಿ ಗಲಾಟೆ ಆರಂಭಿಸುತ್ತಾರೆ. ಇದನ್ನು ಕೃಷ್ಣ ಶಮನ ಮಾಡುತ್ತಾನೆ

ಇಲ್ಲಿ ನಾವು ಗಮನಿಸಬೇಕಾದ ಅಂಶವೇನೆಂದರೆ ಓರ್ವ ಕಪ್ಪು ಹೆಣ್ಣಿಗೆ ಕಠಿಣ ಪರೀಕ್ಷೆಯ ಸ್ವಯಂವರ ಏರ್ಪಡಿಸಿರುವುದು,ಇವಳನ್ನು ಪಡೆಯಲು ದೊಡ್ಡ ದೊಡ್ಡ ರಾಜ-ಮಹಾರಾಜರು ಕಾತರಿಸುತ್ತಿರುವುದು.ಆ ಸಂದರ್ಭದಲ್ಲಿ ಕಪ್ಪನೆ ಹೆಣ್ಣಿನ ಕುರಿತು ತಾತ್ಸಾರ ಭಾವನೆ ಇದಿದ್ದರೆ ಇಂಥ ಸನ್ನಿವೇಶ ನಿರ್ಮಾಣವಾಗುತ್ತಿರಲಿಲ್ಲ.
ಧೃಷ್ಟದ್ಯುಮ್ನ ತನ್ನ ಸಹೋದರಿಯನ್ನು ಕರೆಯುವುದು 'ಕೃಷ್ಣೆ'ಎಂದೇ.ಅಂದರೆ ಕಪ್ಪನೆಯವಳೆ ಎಂದರ್ಥ.ಹೀಗೆ ಕರೆಸಿಕೊಳ್ಳುವುದು ಅವಮಾನಕರವೆಂಬ ಭಾವ ಇರಲ್ಲಿಲ್ಲವೆಂದರ್ಥ.ದ್ರೌಪದಿ ಮೋಹನಾಂಗಿ,ಜಗದೇಕ ಸುಂದರಿ,ಮಹಾಭಾರತದ ನಿಜನಾಯಕಿ ಈ ಮೋಹನಾಂಗಿ

ಮಹಾಭಾರತದ ಇನ್ನೋರ್ವ ಮನಮೋಹಕ ಮೋಹನಾಂಗನೆಂದರೆ ಕೃಷ್ಣ. ಈತನ ಮೈಬಣ್ಣ ಕಪ್ಪು.ಆದ್ದರಿಂದಲೇ ಕೃಷ್ಣ ಅರ್ಥಾತ್ ಕರಿಯ ಎಂಬ ಅನ್ವರ್ಥಕನಾಮ.ಶ್ಯಾಮ ಎಂತಲೂ ಕರೆಯುತ್ತಾರೆ.ಹೀಗೆಂದರೂ ಕಪ್ಪನೆಯವನ್ನು ಎಂದರ್ಥ.ಇಂಥ ಮೋಹನಮುರುಳಿಯನ್ನು ಪಡೆಯಲು ಹಲವಾರು ಕನ್ಯೆಯರು,ಮಹಿಳೆಯರು ಪ್ರಯತ್ನಿಸುತ್ತಾರೆ.ಅವರಲ್ಲಿ ಕೆಲವರು ಯಶಸ್ವಿಯೂಗುತ್ತಾರೆ.ಕಪ್ಪನೇ ಮೈಬಣ್ಣದವರ ಕುರಿತು ಇಂಥ ಮೋಹಕ ಪ್ರಸಂಗಗಳು ತ್ಜರುಗುತ್ತಲೇ ಇರಲ್ಲಿಲ್ಲ.ದ್ವಾಪರಯುಗವನ್ನು ಆವರಿಸಿಕೊಂಡ ಚೇತನವೆಂದರೆ ಕೃಷ್ಣ....ದ್ವಾಪರಯುಗಕ್ಕಿಂತಲೂ ಮೊದಲಿನ ತ್ರೇತ್ರಾಯುಗದ ನಾಯಕ ರಾಮ...

ಈತನ ಮೈಬಣ್ಣವೂ ಕಪ್ಪು.ರಾಮ ಎಂದರೆ ಕಪ್ಪು ಎಂಬರ್ಥವೂ ಇದೆ.ರಾಮ ಅದ್ವೀತಿಯ ಚೆಲುವ.ವಿಶ್ವಾಮಿತ್ರನಿಗೆ ಸಹಾಯ ಮಾಡಿ ಮಿಥಿಲಾನಗರ ಪ್ರವೇಶ ಮಾಡಿದಾಗ ಅಲ್ಲಿನ ಜನತೆ ಈತನ ಅನುಪಮ ಸೌಂದರ್ಯ ನೋಡಿ ನಿಬ್ಬೆರಗಾಗುತ್ತದೆ.ಈ ವರ್ತಮಾನ ಸೀತೆಗೂ ತಲುಪಿ ಆಕೆಯೂ ಈ ಚೆಲುವನನ್ನು ಕಾಣಲು ಕಾತರಳಾಗುತ್ತಾಳೆ.ರಾಮನನ್ನು ಮೊದಲ ಬಾರಿಗೆ ಸಂದರ್ಶಿಸಿದಾಗ ತನ್ನ ಸಖಿಯರು ವರ್ಣಿಸಿದಕ್ಕಿಂತಲೂ ಈ ರಾಮ ಸುಂದರನಾಗಿದ್ದಾನೆ ಎಂದುಕೊಳ್ಳುತ್ತಾಳೆ.ಈಕೆ ಶ್ವೇತ ವರ್ಣೆ.ರಾಮ ಕಪ್ಪು.ಕರಿಯ ಎಂಬ ತೆಗಳಿಕೆ ಭಾವ ಆಗ ಚಾಲ್ತಿಯಲ್ಲಿದ್ದರೆ ಸೀತೆಗಿಂತ ಭಾವನೆ ಬರುತ್ತಿರಲ್ಲಿಲ್ಲವೇನೋ.ತ್ರೇತ್ರಾ
ಯುಗದ ಈ ಶ್ವೇತವರ್ಣೆ ನಾಯಕಿಯನ್ನು ಮದುವೆಯಾದವನು ಕಪ್ಪನೆಯ ರಾಮ.ದ್ವಾಪರಯುಗದ ಕಪ್ಪುವರ್ಣೆ ನಾಯಕಿಯನ್ನು ಮದುವೆಯಾದವನು ಶ್ವೇತವರ್ಣದ ಅರ್ಜುನ

ಕರಾವಳಿ ತೀರದ ಕೇರಳ, ತಮಿಳುನಾಡುಗಳ ನಸುಗಪ್ಪು,ಕಪ್ಪು ಹೆಣ್ಣುಗಳ ದೇಹ ಸೌಂದರ್ಯ ಅಪೂರ್ವ.ಇದೇ ರೀತಿ ದಕ್ಷಿಣ ಭಾರತದ ಕಾಡುಗಳಲ್ಲಿರುವ ಬುಡಕಟ್ಟು ಜನಾಂಗಗಳ ಕಪ್ಪನೆಯ ಹೆಣ್ಣುಗಳ ಸುಂದರತೆ ಕೂಡ.ಆದರೆ ಇಂಥ ಅಪರೂಪದ ಸೌಂದರ್ಯ,ಕಪ್ಪು ಎಂಬ ತಾತ್ಸಾರ ಮನೋಭಾವದಡಿ
ಮರೆಯಾಗಿದೆ.


ಕಪ್ಪಾಗಿರುವವರ ಬಗ್ಗೆ ಪ್ರಕೃತಿಯೂ ಒಲವು ಹೊಂದಿದೆ.ಕಪ್ಪನೆ ಮೈಬಣ್ಣದವರಿಗೆ 'ಸನ್ ಬರ್ನ್'ಸಾಧ್ಯತೆ ಭಾರಿ ಕಡಿಮೆ.ಅದೇ ರೀತಿ ಚರ್ಮದ ಕಾಯಿಲೆಗಳು ತಗುಲುವ ಸಾಧ್ಯತೆ ಕೂಡ ಕಡಿಮೆ.ಹವಾಮಾನದ ವ್ಯೆಪರಿತ್ಯಗಳನ್ನು ಕಪ್ಪು ಚರ್ಮ ಸುಲಭವಾಗಿ ತಡೆದುಕೊಳ್ಳಬಲ್ಲುದು.ಇಷ್ಟೇಲ್ಲಾ ಹಿನ್ನೆಲೆಯಿರುವ ಕಪ್ಪುವರ್ಣದ ಬಗ್ಗೆ ಭಾರತೀಯರು ತಾತ್ಸಾರ ಮನೋಭಾವನೆ ತಳೆದಿರುವುದು ವಿಷಾದನೀಯ

Comments

  1. ತುಂಬಾ ಚೆನ್ನಾಗಿದೆ ನಿಮ್ಮ ಬರವಣಿಗೆ.. ನಿಜಕ್ಕೂ ನನಗೆ ಬಹಳಷ್ಟು ಕೊರಗಿತ್ತು ನಾನು ಕಪ್ಪಗೆ ಅಂತಾ... ಅದಕ್ಕೆ ನಾನು ಕೆಲಸ ಮಾಡುವ ಪರಿಸರ , ಅವರ ಕ್ಷುಲ್ಲಕ ಕಾರಣಗಳು ಇರಬಹುದು. ಆದ್ರೆ ದ್ರೌಪದಿ, ರಾಮನ ನಿದರ್ಶನಗಳು ತುಂಬಾ ಪ್ರಭಾವ ಬೀರಿದವು...ಒಟ್ಟಾರೆ ನನ್ನ ದೃಷ್ಟಿಕೋನ ಬದಲಾಗುತ್ತಿದೆ....

    ReplyDelete
  2. naavu draavidaru namma moola banna kappu
    aadaroo aaryara haage bannada hinde beelutteve

    ReplyDelete

Post a Comment

Popular posts from this blog

ಹೆಣ್ಣೆ, ನಿನ್ನ ಮತ್ತೊಂದು ಹೆಸರು ಚಂಚಲತೆಯೆ............?

'ಸನ್ ಮ್ಯೂಸಿಕ್' ವಾಹಿನಿಯಲ್ಲಿ 'ವಿನ್ನೈತಾಂಡಿ ವರುವಯ' ಚಿತ್ರದ ಹಾಡುಗಳು ಜನಪ್ರಿಯ. ಇವುಗಳನ್ನು ಆಗಾಗ ನೋಡುತ್ತಿದ್ದೆನಾದರೂ ಚಿತ್ರ ವೀಕ್ಷಿಸಿರಲಿಲ್ಲ.  ಮೊನ್ನೆ  ಈ ಚಿತ್ರದ ಡಿವಿಡಿ  ತಂದು ನೋಡಿದೆ. ಮೊದಲಿಗೆ ಇಡೀ ಚಿತ್ರದ ವ್ಯಾಕರಣ ಹೊಸತನವಿದೆ ಎನಿಸಿತು. ಇಡೀ ಚಿತ್ರವನ್ನು ಪ್ರೆಸೆಂಟ್ ಮಾಡಿರುವ ರೀತಿ ಬಗ್ಗೆ ಮೆಚ್ಚುಗೆ ಮೂಡಿತು. ಇವೆಲ್ಲದರ ಜೊತೆಗೆ ಕಥೆಯ ಹೂರಣ ಕೂಡ ವಿಭಿನ್ನವಾಗಿದೆ. ಫ್ಲಾಷ್ ಬ್ಯಾಕಿನ ಮೂಲಕ ಇಡೀ ಸ್ಟೋರಿಯನ್ನು ಕಥಾ ನಾಯಕ ನಿರೂಪಿಸುತ್ತಾ ಹೋಗುತ್ತಾನೆ. ಕಥಾ ನಾಯಕ ಕಾರ್ತಿಕ್ (ಸಿಂಬರಸನ್) ಇಂಜಿನಿಯರ್. ಆದರೀತನಿಗೆ ಸಿನೆಮಾ ಬಗ್ಗೆ ತೀವ್ರ ಆಸಕ್ತಿ. ಸ್ನೇಹಿತರ ಮೂಲಕ ಪರಿಚಯವಾದ  ಸಿನಿಮಾ ಕ್ಯಾಮರಾಮನ್ ಗಣೇಶ್(ಗಣೇಶ್) ತಮ್ಮ ಪ್ರಭಾವ ಬಳಸಿ ಖ್ಯಾತ ನಿರ್ದೇಶಕರ ಬಳಿ ಸಹಾಯಕ ನಿರ್ದೇಶಕರಾಗಿ ಸೇರಿಸುತ್ತಾರೆ. ಒಮ್ಮೆ ತಾವಿರುವ ಬಾಡಿಗೆ ಮನೆ ಗೇಟಿನ ಬಳಿ ಕಾರ್ತೀಕ್ ನಿಂತಿದ್ದಾಗ ಸೀರೆಯುಟ್ಟ ಯುವತಿಯೋರ್ವಳು ತೀರಾ ಬೇಗವೂ ಅಲ್ಲದ ನಿಧಾನವೂ ಅಲ್ಲದ ರೀತಿ ನಡೆದು ಬರುತ್ತಿರುವುದನ್ನು ನೋಡುತ್ತಾನೆ. ನೋಡುತ್ತಾ ನೋಡುತ್ತಾ ಈತನ ಕಣ್ಣುಗಳಲ್ಲಿ ಮಿಂಚು. 'love at first sight' ಭಾವನೆ. ಆಕೆ ಗೇಟ್ ತೆರೆದು ಈತನಿರುವ ಮನೆಯ ಮೊದಲ ಮಹಡಿಗೆ ತೆರಳುತ್ತಾನೆ. ಬಳಿಕ ಈತನ ಸಹೋದರಿ ಮೂಲಕ ಆಕೆ, ಮಲೆಯಾಳಿ ಮನೆ ಮಾಲೀಕರ ಮಗಳು ಜೆಸ್ಸಿ (ತ್ರಿಷಾ) ಎನ್ನುವುದು ತಿಳಿದು ಬರುತ್ತದೆ.

ಕಾಸರಗೋಡು ಕನ್ನಡಿಗರ ಹೋರಾಟ ಮತ್ತು ಬಲಿದಾನಗಳನ್ನು ಕರ್ನಾಟಕ ಸರ್ಕಾರ ಮರೆತಿದೆಯೇ...?

" ಕಾಸರಗೋಡು, ಕರ್ನಾಟಕದ ಕನ್ಯಾಕುಮಾರಿ. ಉತ್ತರದಲ್ಲಿ ಬೆಳಗಾವಿ, ಬಳ್ಳಾರಿಗಳಂತೆ ದಕ್ಷಿಣ ಕನ್ನಡದಲ್ಲಿ ನಮ್ಮದು ಕರ್ನಾಟಕದ ಕನ್ಯಾಕುಮಾರಿ. ಕನ್ನಡನಾಡಿನ ಈ ತೆಂಕಣ ಬಾಗಿಲನ್ನು ತೆರೆದಿಟ್ಟು ಕನ್ನಡಿಗರು ಎಚ್ಚರತಪ್ಪಿ ನಿದ್ರೆ ಹೋದುದ್ದೇ ಆದರೆ ನಮ್ಮ ಜನರಿಗೂ, ನಮ್ಮ ನಾಡಿಗೂ ಅಮೂಲ್ಯವಾದ ಕನ್ನಡ ಸಂಸ್ಕೃತಿಗೂ ಪ್ರಮಾದ ಒದಗುವುದರಲ್ಲಿ ಸಂಶಯವಿಲ್ಲ. ವಿಶಾಲ ಕೇರಳ ಚಳವಳಿಯು ಆರಂಭವಾಗಿ ಹತ್ತು ವರ್ಷಗಳು ಸಂದುಹೋದವು. ದಕ್ಷಿಣ ಕನ್ನಡ, ಕೊಡಗು, ನೀಲಗಿರಿ ಜಿಲ್ಲೆಗಳು ಮಲಬಾರಿನೊಂದಿಗೆ ಜತೆಗೊಂಡು ಕೇರಳ ಸಂಸ್ಥಾನ ಅಥವಾ ಪಶ್ಚಿಮ ಪ್ರಾಂತ ಸಂಸ್ಥಾನವೊಂದು ನಿರ್ಮಾಣವಾಗಬೇಕೆಂದು ಈ ಚಳವಳಿಯು ಪ್ರಬಲವಾಗುತ್ತಾ ನಡೆದಿದೆ. ಈ ಚಳವಳಿಯ ಮರ್ಮವನ್ನು ತಿಳಿದುಕೊಂಡು ಕನ್ನಡಿಗರು ಅದನ್ನು ಸಕಾಲದಲ್ಲಿಯೇ ಪ್ರತಿಭಟಿಸದೇ ಹೋದರೆ ಸ್ವಲ್ಪಕಾಲದೊಳಗಾಗಿಯೇ ದಕ್ಷಿಣ ಕನ್ನಡ ಜಿಲ್ಲೆಯ ಕಾಸರಗೋಡಾದರೂ ಮಲಬಾರಿನವರ ಮಡಿಲಿಗೆ ಬೀಳಬೇಕಾಗಬಹುದು" ¨sÁµÁªÁgÀÄ ¥ÁæAvÀå gÀZÀ£ÉAiÀiÁUÀĪÀÅzÀPÀÆÌ MA¨sÀvÀÄÛ ªÀµÀðUÀ½UÀÆ ªÉÆzÀ¯Éà ²æÃzsÀgÀ PÀQ̯ÁAiÀÄgÀÄ ºÉýzÀÝ RavÀ C©ü¥ÁæAiÀÄ«zÀÄ. EªÀgÀÄ PÁ¸ÀgÀUÉÆÃr£À ¸ÀÄ¥Àæ¹zÀÞ ªÀQîgÁVzÀÝgÀÄ. PÁ¸ÀgÀUÉÆÃqÀ£ÀÄß PÀ£ÁðlPÀPÉÌ ¸ÉÃ¥ÀðqÉUÉƽ¸À®Ä ¸ÀvÀvÀ 25 ªÀµÀð ºÉÆÃgÁl ªÀiÁrzÀgÀÄ. CªÀgÀ fëvÁªÀ¢üAiÀĪÀgÉUÀÆ F ºÉÆÃgÁlzÀ°è ¸ÀQæAiÀÄgÁVzÀÝgÀÄ. 1947g

ಕನ್ನಡದ ಕತ್ತು ಹಿಚುಕುತ್ತಿರುವ ಕೇರಳ ಸರಕಾರ…!?

ಶೀರ್ಷಿಕೆ ಓದಿದಾಗ ಆಶ್ವರ್ಯ-ಪ್ರಶ್ನಾರ್ಥಕ ಭಾವಗಳು ಮೂಡುವುದು ಸಹಜ. ಆದರೆ ‘ಕನ್ನಡದ ಕತ್ತು ಹಿಚುಕುತ್ತಿರುವ ಕೇರಳ ಸರಕಾರ ಎನ್ನುವುದು ಅಕ್ಷರಶಃ ಸತ್ಯ. ಗಡಿ ಅಂಚಿನ ಕಾಸರಗೋಡಿನಿಂದ ಕನ್ನಡಕ್ಕೆ ಸ್ಥಾನವೇ ಇಲ್ಲದಂತೆ ಮಾಡುವ ನಿಟ್ಟಿನಲ್ಲಿ ಆ ಸರಕಾರ ನಾನಾ ಬಗೆಯ ತಂತ್ರಗಾರಿಕೆಯನ್ನು ಮಾಡುತ್ತಲೇ ಬಂದಿದೆ. ಭಾಷಾವಾರು ಪ್ರಾಂತ್ಯ ರಚನೆಯಾಗಿ 54 ವರ್ಷ ಸಂದರೂ ಕಾಸರಗೋಡಿನಲ್ಲಿ ಕನ್ನಡ ಉಳಿದಿರುವುದನ್ನು ಕಂಡು ಈ ಬಾರಿ ಪ್ರಬಲ ಅಸ್ತ್ತ ಪ್ರಯೋಗಿಸಿದೆ. ಇದಕ್ಕೆ ತಕ್ಕ ಪ್ರತ್ಯಸ್ತ್ರ ಹೂಡದೇ ಇದ್ದರೆ ಸಂಭವಿಸುವ ಅಪಾಯಗಳು ಅನೇಕ. ಅವುಗಳೇನು…..? ಬದಿಯಡ್ಕ ಶಾಲಾ ಮಕ್ಕಳು   2011ರ ಜುಲೈ 8 ರಿಂದ 17ರವರೆಗೆ ಕೇರಳದಲ್ಲಿನ ಕನ್ನಡ ಪ್ರಾಂತ್ಯಗಳಾದ ಕಾಸರಗೋಡು-ಹೊಸದುರ್ಗಗಳಲ್ಲಿ ಕ್ಷೇತ್ರ ಪ್ರವಾಸದಲ್ಲಿದ್ದೆ. ಎಂದಿನಂತೆ ಕನ್ನಡ ಭಾಷಾ ಚಳವಳಿಗಾರನ್ನು ಭೇಟಿಯಾದೆ. ‘ಕನ್ನಡಕ್ಕೆ ಭಾರಿ ಅಪಾಯ ತಂದೊಡ್ಡುವ ಕ್ರಮವನ್ನು ಕೇರಳ ಸರಕಾರ ಜರುಗಿಸಿದೆ. ಇದರಿಂದ ಕಾಸರಗೋಡಿನ ಕನ್ನಡದ ಕತ್ತು ಹಿಚುಕಿದಂತಾಗುತ್ತದೆ. ಕೆಲವೇ ವರ್ಷಗಳಲ್ಲಿ ಇಲ್ಲಿನ ಕನ್ನಡ ಸಂಸ್ಕೃತಿ ಕಣ್ಮರೆಯಾಗಲಿದೆ ಎಂಬ ಆತಂಕವನ್ನು ಮುಳ್ಳೇರಿಯಾದ ಆಯುರ್ವೇದ ವೈದ್ಯ ನರೇಶ್ ಮತ್ತು ಕಾಸರಗೋಡಿನ ಸರಕಾರಿ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕ ರತ್ನಕರ ಮಲ್ಲಮೂಲೆ ಅವರು ವ್ಯಕ್ತಪಡಿಸಿದರು.  ಕನ್ನಡ ಭಾಷಾ ಶಾಲೆಗಳಲ್ಲಿ 10ನೇ ತರಗತಿವರೆಗೆ ಎರಡನೇ ಭಾಷೆಯಾಗಿ ಮಲೆಯಾಳಂ ಕಲಿಸಬೇಕು-ಕಲಿಯಬೇಕು ಎನ